ಸಿಎಂ ಡಿಕೆಶಿ ಅವರೇ, ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿರುವುದು ಕಣ್ಣಿಗೆ ಕಾಣಿಸುತ್ತಿಲ್ಲವೇ? ಆರ್. ಅಶೋಕ್

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳಾದರೂ ಸರ್ಕಾರಿ ಶಾಲೆಯ ಮಕ್ಕಳಿಗೆ ಇನ್ನೂ ಶೂ- ಸಾಕ್ಸ್ ವಿತರಿಸಿಲ್ಲ. ಸಕ್ಕರೆ ಬೆಲೆ ಹೆಚ್ಚಾಗಿದೆ ಎಂಬ ನೆಪವೊಡ್ಡಿ ಕೆಲವೆಡೆ ರಾಗಿ ಗಂಜಿ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಿನಕ್ಕೊಂದು ಬಣ್ಣಬಣ್ಣದ ದುಬಾರಿ Louis Vuitton ಶಾಲು ಹಾಕುವ ಮುಖ್ಯಮಂತ್ರಿಗಳಿಗೆ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ-ಸಾಕ್ಸ್ ಕೊಡುವ ಮನಸ್ಸಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಸಿಎಂ ಡಿಕೆ ಶಿವಕುಮಾರ್ ಅವರೇ, ಲಕ್ಷಾಂತರ ರೂಪಾಯಿ ಮೌಲ್ಯದ Louis Vuitton ಬ್ರ್ಯಾಂಡ್ ಶಾಲು ಹೊದ್ದು ಮೆರೆಯುವ ನಿಮಗೆ, ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿರುವುದು ಕಣ್ಣಿಗೆ ಕಾಣಿಸುತ್ತಿಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಬಡ ಕುಟುಂಬಗಳ ಮಕ್ಕಳಿಗೆ ಒಂದು ಜೋಡಿ ಶೂ, ಸಾಕ್ಸ್ ಕೊಡಲು ಸರ್ಕಾರದ ಬಳಿ ಅನುದಾನವಿಲ್ಲವೇ? ಐಷಾರಾಮಿ ರಾಜಕಾರಣ, ಮುಖ್ಯಮಂತ್ರಿಗಳು ಮತ್ತು ಸಚಿವರು ಕುಮಾರಕೃಪಾ ನವೀಕರಣ, ಡಿನ್ನರ್ ಪಾರ್ಟಿಗಳಿಗೆ ಕೋಟಿ ಕೋಟಿ ಹಣವಿದೆ. ಎಂದು ಹೇಳಿದ್ದಾರೆ.

ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಸರ್ವನಾಶ ಮಾಡಿ ಖಾಸಗಿ ಶಿಕ್ಷಣ ಮಾಫಿಯಾಗೆ ಅನುಕೂಲ ಮಾಡಿಕೊಡುವುದೇ ನಿಮ್ಮ ಸರ್ಕಾರದ ರಹಸ್ಯ ಅಜೆಂಡಾನಾ? ಬ್ರ್ಯಾಂಡೆಡ್ ಶಾಲು ಹೊದ್ದು ಮೆರೆಯುವ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಈ ಐಷಾರಾಮಿ ಉಡುಪುಗಳ ಹಿಂದೆ ಬಡ ಮಕ್ಕಳ ಕಣ್ಣೀರು ಮತ್ತು ಹಸಿವು ಅಡಗಿದೆ ಎಂದಿದ್ದಾರೆ.

ಶಾಲೆಯಲ್ಲಿ ಶಿಕ್ಷಕರಿಲ್ಲ (61,000 ಹುದ್ದೆಗಳು ಖಾಲಿ), ಕುಡಿಯಲು ನೀರಿಲ್ಲ, ಶೌಚಾಲಯಗಳಿಲ್ಲ, ಈಗ ಕೊನೆಗೆ ಕಾಲಿಗೆ ಶೂ-ಸಾಕ್ಸ್ ಹಾಗೂ ನೀಡುತ್ತಿದ್ದ ರಾಗಿ ಗಂಜಿಯನ್ನೂ ಬಂದ್ ಮಾಡಿದ್ದೀರಿ ಎಂದರು. ಬಡ ಮಕ್ಕಳ ಹೊಟ್ಟೆಗೆ ಹೊಡೆದು, ಅವರ ಕಾಲಿಗೂ ಶೂ-ಸಾಕ್ಸ್ ಇಲ್ಲದಂತೆ ಮಾಡುವುದು ನಿಮ್ಮ ಗ್ಯಾರಂಟಿ ಸರ್ಕಾರದ ಸಾಧನೆಯೇ? ಎಂದು ಪ್ರಶ್ನಿಸಿದ್ದಾರೆ.

ಶೈಕ್ಷಣಿಕ ವರ್ಷ ಆರಂಭವಾಗಿ 3 ತಿಂಗಳು ಕಳೆದರೂ ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಇದುವರೆಗೂ ಶೂ ಮತ್ತು ಸಾಕ್ಸ್ ವಿತರಿಸಿಲ್ಲ. ‘ಸಕ್ಕರೆ ಬೆಲೆ ಹೆಚ್ಚಾಗಿದೆ’ ಎಂಬ ಕ್ಷುಲ್ಲಕ ನೆಪವೊಡ್ಡಿ ಬಡ ಮಕ್ಕಳಿಗೆ ನೀಡುತ್ತಿದ್ದ ರಾಗಿ ಗಂಜಿಯನ್ನೂ ಕಸಿದುಕೊಂಡಿದ್ದೀರಿ ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others