ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಚಂಪತ್ ರೈ ರಾಜೀನಾಮೆ ಅಂಗೀಕಾರ!

ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ (ಮುಖ್ಯಸ್ಥ) ಚಂಪತ್ ರೈ (Champat Rai) ಅವರು ತಮ್ಮ ಹುದ್ದೆಗೆ ನೀಡಿರುವ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದೆ. ಮಂದಿರದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಅವ್ಯವಹಾರ ಮತ್ತು ಕಳ್ಳತನ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ವಿವಾದದ ಹಿನ್ನೆಲೆ: ರಾಮಮಂದಿರ ನಿರ್ಮಾಣ ಮತ್ತು ಟ್ರಸ್ಟ್ಗೆ ಸಾರ್ವಜನಿಕರಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳು […]
ಅಕ್ರಮ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಕಾಂಗ್ರೆಸ್ ಹರಸಾಹಸ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್ಐಆರ್) ಯ ಮೂಲ ಆಶಯವನ್ನೇ ಕಾಂಗ್ರೆಸ್ ಸರ್ಕಾರ ಬುಡಮೇಲು ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಇಂದು ಎನ್ಡಿಎ ನಿಯೋಗದಲ್ಲಿ ತೆರಳಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಕೇಂದ್ರ ಸಚಿವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗ ರೂಪಿಸಿರುವ ಎಸ್ ಐ ಆರ್ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಸಂಪೂರ್ಣವಾಗಿ ಗಾಳಿಗೆ […]
ರಾಜ್ಯ ಸರಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈ ಗಂಭೀರ ಆರೋಪ

ಬೆಂಗಳೂರು: ರಾಷ್ಟ್ರದಲ್ಲಿಯೇ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ಹೆಚ್ಎಂಟಿ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಗಂಭೀರ ಪ್ರಯತ್ನ ನಡೆಸುತ್ತಿರುವ ಬೆನ್ನಲ್ಲಿಯೇ ರಾಜ್ಯ ಕಾಂಗ್ರೆಸ್ ಸರಕಾರವು ಅರಣ್ಯ ಇಲಾಖೆಯನ್ನು ಚೂ ಬಿಟ್ಟು ಅಡ್ಡಿಪಡಿಸಲು ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು. ಕೆಲ ಮಾಧ್ಯಮಗಳಲ್ಲಿ ಹೆಚ್ಎಂಟಿಗೆ ರಾಜ್ಯ ಅರಣ್ಯ ಇಲಾಖೆ ನೋಟಿಸ್ ನೀಡಿ ಭೂಮಿ ತೆರವು ಮಾಡಲು ಗಡುವು ವಿಧಿಸಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ತುರ್ತು ಮಾಧ್ಯಮಗೋಷ್ಠಿ ನಡೆಸಿದ ಕೇಂದ್ರ […]
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ಬಿಗ್ ರಿಲೀಫ್

ಹೈದರಾಬಾದ್: ಇಲ್ಲಿನ ಪ್ರಸಿದ್ಧ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun) ಅವರು ಸೋಮವಾರ ನಾಂಪಲ್ಲಿ ಕೋರ್ಟ್ಗೆ ವರ್ಚುವಲ್ ಆಗಿ ವಿಚಾರಣೆಗೆ ಹಾಜರಾಗಿದ್ದಾರೆ. ಸದ್ಯ ಸಿನಿಮಾ ಶೂಟಿಂಗ್ ನಿಮಿತ್ತ ಮುಂಬೈನಲ್ಲಿರುವ ಕಾರಣ, ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಲು ಅವರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಅಲ್ಲು ಅರ್ಜುನ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ […]
ಬರ ನಿರ್ವಹಣೆಗೆ ಸಕಲ ಸಿದ್ಧತೆ: ಕುಡಿಯುವ ನೀರು, ಮೇವಿನ ಸಮಸ್ಯೆಯಾಗದಂತೆ ಕ್ರಮ- DCM ಡಾ.ಜಿ.ಪರಮೇಶ್ವರ್

ಬೆಂಗಳೂರು : ನಾವು ಬರಗಾಲ ಎದುರಿಸಬೇಕಾದ ಸಂದರ್ಭ ಬಂದಿದೆ. ಈಗಾಗಲೇ ನಾನು ಮತ್ತು ಮುಖ್ಯಮಂತ್ರಿಗಳು ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಸಮಸ್ಯೆ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ಮತ್ತು ನಿರ್ದೇಶನಗಳನ್ನು ನೀಡಿದ್ದೇವೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಇಂದು ವಿಧಾನಸೌಧದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಳಗಾವಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ, ಚರ್ಚಿಸಿದ್ದೇನೆ. ಜಲಾಶಯಗಳು ಡೆಡ್ […]
ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಬಾಲರಾಮನಿಗೆ ಅರ್ಪಿಸಿದ್ದ 5 ಕೋಟಿ ಮೌಲ್ಯದ ಚಿನ್ನದ ಪುಸ್ತಕ ನಾಪತ್ತೆ!?

ಅಯೋಧ್ಯೆ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಅಯೋಧ್ಯೆ ರಾಮಮಂದಿರದ ದೇಣಿಗೆ ದುರುಪಯೋಗ ಹಗರಣದ ಬೆನ್ನಲ್ಲೇ, ಇದೀಗ ಶ್ರೀರಾಮನಿಗೆ ಕಾಣಿಕೆಯಾಗಿ ನೀಡಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಅಪರೂಪದ ವಸ್ತು ನಾಪತ್ತೆಯಾಗಿದೆ ಎಂಬ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ರಾಮನ ಹೆಸರಿನಲ್ಲಿ ಸಂಗ್ರಹವಾದ ಹಣವನ್ನು ಲೂಟಿ ಮಾಡಿದವರ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮ ಮಾಡಬೇಕೆಂಬ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಹೊಸ ವಿವಾದ ಮುನ್ನೆಲೆಗೆ ಬಂದಿದೆ. ಏನಿದು ಘಟನೆ? ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಎಸ್. ಲಕ್ಷ್ಮಿನಾರಾಯಣ್ ಅವರು ರಾಮಮಂದಿರ […]
ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಬೀಜ ದಾಸ್ತಾನು ಜಪ್ತಿ

ಬೆಂಗಳೂರು : ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ ನೀಡಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಬೀಜ ಮತ್ತು ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಂಡಿದ್ದಾರೆ. ಅನಧಿಕೃತವಾಗಿ ಬೀಜ,ರಸಗೊಬ್ಬರ ದಾಸ್ತಾನು, ಮಾರಾಟ ನಿಯಂತ್ರಿಸಲು ಕೃಷಿ ಇಲಾಖೆ ಆಯುಕ್ತರಾದ ಡಾ.ಬಿ.ಸಿ.ಸತೀಶ್ ಅವರ ಸೂಚನೆ ಮೇರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೃಷಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ […]
ಕಾರವಾರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಿಎಸ್ಐ ಬಂಧನ

ಕಾರವಾರ: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಅಭಿನಂದನ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಮೂಲಗಳ ಪ್ರಕಾರ, ಆರೋಪಿ ಪಿಎಸ್ಐ ಅಭಿನಂದನ್ ಗೌಡ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳಕ್ಕೆ ಕರೆತಂದಿದ್ದ ಎನ್ನಲಾಗಿದೆ. ಅಲ್ಲಿನ ಸ್ಥಳೀಯ ಲಾಡ್ಜ್ ಒಂದರಲ್ಲಿ ಬಾಲಕಿಯ ಮೇಲೆ […]
ಸಚಿವ ಸತೀಶ್ ಜಾರಕಿಹೊಳಿ ಆಪ್ತ KMF ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಬೇರೆ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಯಾದ ಮುಖಂಡರಿಗೆ ಉತ್ತಮ ಸ್ಥಾನ ನೀಡಿ ಗೌರವಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬೆಳಗಾವಿಯ ರಾಯಭಾಗ ವಿಧಾನಸಭಾ ಕ್ಷೇತ್ರದ ಮುಖಂಡ ಹಾಗೂ ಕೆಎಂಎಫ್ನ ಮಾಜಿ ನಿರ್ದೇಶಕ ಸದಾಶಿವ ವಸಂತ ದೇಶಿಂಗೆ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು, ರಾಯಣ್ಣ ಗೋಗ್ರೀನ್ ಫೌಂಡೇಷನ್ನ ಅಧ್ಯಕ್ಷರೂ ಆದ ದೇಶಿಂಗೆ ಅವರು, ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು […]
ನಾಳೆ ಬೆಂಗಳೂರು ಮೂಲದ ಗೌರಿ ಸ್ಪ್ರಾಟ್ ಕೈಹಿಡಿಯಲಿದ್ದಾರೆ ಬಾಲಿವುಡ್ ನಟ ಆಮಿರ್ ಖಾನ್

ಮುಂಬೈ: ಹಿಂದಿ ಚಿತ್ರರಂಗದ ಖ್ಯಾತ ನಟ ಆಮಿರ್ ಖಾನ್ ತಮ್ಮ ಬದುಕಿನ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿದ್ದಾರೆ. ತಮ್ಮ ದೀರ್ಘಕಾಲದ ಒಡನಾಡಿ ಗೌರಿ ಸ್ಪ್ರಾಟ್ ಅವರನ್ನು ಜುಲೈ 5ರಂದು ವಿವಾಹವಾಗುತ್ತಿರುವುದಾಗಿ ನಟ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ನಿವಾಸದಲ್ಲಿ ಸರಳ ಮದುವೆ ಸಂಭ್ರಮ ಈ ವಿವಾಹ ಮಹೋತ್ಸವವು ಮುಂಬೈನಲ್ಲಿರುವ ಆಮಿರ್ ಖಾನ್ ಅವರ ಸ್ವಗೃಹದಲ್ಲೇ ಅತ್ಯಂತ ಸರಳವಾಗಿ ನೆರವೇರಲಿದೆ. ಅದ್ಧೂರಿತನಕ್ಕೆ ಆಸ್ಪದ ನೀಡದೆ ಕೇವಲ ಕುಟುಂಬದ ಸದಸ್ಯರು, ಆಪ್ತ ಸ್ನೇಹಿತರು ಹಾಗೂ ಚಿತ್ರರಂಗದ ತೀರಾ ಕೆಲವು ಗಣ್ಯರನ್ನು ಮಾತ್ರ ಈ […]