ಟಿಎಂಸಿ ಬ್ಯಾಂಕ್ ಖಾತೆಗಳ ಜಪ್ತಿ: ತುರ್ತು ವಿಚಾರಣೆ ಕೋರಿದ್ದ ಮಮತಾ ಬ್ಯಾನರ್ಜಿ ಬಣದ ಅರ್ಜಿ ಹೈಕೋರ್ಟ್‌ನಲ್ಲಿ ತಿರಸ್ಕಾರ!

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಕಾನೂನು ವಲಯದಲ್ಲಿ ಭಾರಿ ಹಿನ್ನಡೆಯಾಗಿದೆ. ಪಕ್ಷದ ಮೂರು ಪ್ರಮುಖ ಬ್ಯಾಂಕ್ ಖಾತೆಗಳನ್ನು ಪೊಲೀಸರು ಮುದ್ರೆ ಜಪ್ತಿ (Debit Freeze) ಮಾಡಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಲ್ಲಿಸಿದ್ದ ತುರ್ತು ವಿಚಾರಣೆಯ ಕೋರಿಕೆಯನ್ನು ಕೋಲ್ಕತ್ತಾ ಹೈಕೋರ್ಟ್ ತಿರಸ್ಕರಿಸಿದೆ. ಬರೋಬ್ಬರಿ 440 ಕೋಟಿ ರೂಪಾಯಿಗಳ ನಿಧಿಯನ್ನು ಹೊಂದಿರುವ ಈ ಖಾತೆಗಳ ಜಪ್ತಿಯಿಂದಾಗಿ ಪಕ್ಷದ ದೈನಂದಿನ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ನ್ಯಾಯಾಲಯವು ಈ ಅರ್ಜಿಯನ್ನು ಸಾಮಾನ್ಯ ಪ್ರಕ್ರಿಯೆಯಡಿಯಲ್ಲೇ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಪ್ರಕರಣದ […]

365 ದಿನವೂ ಗ್ರಾಮೀಣ ಉದ್ಯೋಗ ಖಾತ್ರಿಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ನವದೆಹಲಿ : ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮ ಸ್ವರಾಜ್ಯದ ಪ್ರತಿಪಾದಕರಾಗಿದ್ದ ಮಹಾತ್ಮಾ ಗಾಂಧೀ ಹೆಸರು ಕೈಬಿಟ್ಟಿರುವ ಕೇಂದ್ರ ಸರ್ಕಾರ, ಮಹಾತ್ಮಾಗಾಂಧೀ ವಿಬಿ ಜಿ ರಾಮ್ ಜೀ ಎಂದು ಮರುನಾಮಕರಣ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆಗ್ರಹಿಸಿದ್ದಾರೆ. ದೆಹಲಿಯಲ್ಲಿಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲ ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರು ಭಾರತ ಹಳ್ಳಿಗಳ ದೇಶವಾಗಿದ್ದು, ದೇಶದ […]

ಸಾರಿಗೆ ಬಸ್ ಟೈರ್ ಸ್ಪೋಟಗೊಂಡು ಪಲ್ಟಿ: ಇಬ್ಬರು ಸ್ಥಳದಲ್ಲೇ ಸಾ*ವು, ಹಲವರಿಗೆ ಗಾಯ

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಇಂದು ಅತ್ಯಂತ ಕರುಣಾಜನಕ ರಸ್ತೆ ದುರಂತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್‌ನ ಟೈರ್ ದಿಢೀರನೆ ಹಾರಿಹೋದ ಪರಿಣಾಮ, ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಈ ಘೋರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಜಾಗದಲ್ಲೇ ಪ್ರಾಣ ಕಳೆದುಕೊಂಡಿದ್ದು, 60ಕ್ಕೂ ಹೆಚ್ಚು ಮಂದಿ ರಕ್ತಸಿಕ್ತ ಗಾಯಗೊಂಡಿದ್ದಾರೆ. ತಾಲೂಕಿನ ಮಧುವನಹಳ್ಳಿ ಬೈಪಾಸ್ ಹೆದ್ದಾರಿಯ ಬಳಿ ಈ ಅವಘಡ ನಡೆದಿದೆ. ಮೃತರನ್ನು ಕೊಳ್ಳೇಗಾಲ ಮೂಲದ ಪುಟ್ಟನಂಜಮ್ಮ (60 ವರ್ಷ) ಹಾಗೂ ಕುದೇರು ಗ್ರಾಮದ […]

ತನಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವೈವಾಹಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ದೂರಾಗುವ ದಂಪತಿಗಳ ಜೀವನಾಂಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪನ್ನು ನೀಡಿದೆ. ಪತಿಗಿಂತಲೂ ಹೆಚ್ಚಿನ ವೇತನ ಗಳಿಸುತ್ತಾ ಆರ್ಥಿಕವಾಗಿ ಸದೃಢವಾಗಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ ಹೈಕೋರ್ಟ್ ನ್ಯಾಯಪೀಠವು ಈ ಆದೇಶ ಹೊರಡಿಸಿದ್ದು, ಪತ್ನಿಗೆ ಪ್ರತಿ ತಿಂಗಳು ಜೀವನಾಂಶ ಪಾವತಿಸುವಂತೆ ಕೆಳಹಂತದ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಸಂಪೂರ್ಣವಾಗಿ ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ ಏನು? ಇತ್ತೀಚಿನ ವರ್ಷಗಳಲ್ಲಿ […]

ರಾಜ್ಯಕ್ಕೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಖಾಸಗಿಗಿಂತ ಬಲಿಷ್ಠ, ಖಾಸಗೀಕರಣವಿಲ್ಲ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್‌ ಸರಬರಾಜು (ವಿತರಣೆ) ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ […]

ವಿದ್ಯುತ್ ನಿಗಮಗಳ ಖಾಸಗೀಕರಣ ಬೇಡ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

ಬೆಂಗಳೂರು : “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡದಿರುವ ವಿಚಾರವಾಗಿ ನಾನೊಬ್ಬನೇ ತೀರ್ಮಾನ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ, ನಿಮ್ಮ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಅಸೋಸಿಯೇಷನ್ ಒಕ್ಕೂಟದವರು ಬೆಂಗಳೂರು ಅರಮನೆ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡಬಾರದು ಎಂದು […]

ಬೆಂಗಳೂರು ನಗರ, ಗ್ರಾಮಾತಂರದಲ್ಲಿ ಅಬಕಾರಿ ಇಲಾಖೆಯ ಡಿಸಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಅಲರ್ಟ್ ಆಗಿರುವ ಲೋಕಾಯುಕ್ತ ಪೊಲೀಸರು ಇಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಒಟ್ಟು ಒಂಬತ್ತು ಅಬಕಾರಿ ಉಪ ಆಯುಕ್ತರ (ಡಿಸಿ) ಕಚೇರಿಗಳ ಮೇಲೆ ಏಕಕಾಲದಲ್ಲಿ ಹಠಾತ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರ ನೇರ ಉಸ್ತುವಾರಿಯಲ್ಲಿ ಈ ಹಠಾತ್ ದಾಳಿ ನಡೆದಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ 8 ಪ್ರಮುಖ ಡಿಸಿ ಕಚೇರಿಗಳು ಹಾಗೂ […]

ವೈದ್ಯಕೀಯದ ಜೊತೆ ಸಾಹಿತ್ಯ ಸೇವೆ: ದಂತ ವೈದ್ಯೆ ಡಾ. ಅನುಷಾಗೆ ಒಲಿದ ‘ಜನಸಿರಿ ಪ್ರಶಸ್ತಿ’!

ಬೆಂಗಳೂರು: ವೈದ್ಯಕೀಯ ವೃತ್ತಿಯ ಜೊತೆಗೆ ಸಾಹಿತ್ಯ ಮತ್ತು ಸಮಾಜಸೇವಾ ರಂಗದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಬೆಂಗಳೂರಿನ ಪರಿ ಡೆಂಟಲ್ ಕೇರ್‌ನ ದಂತ ವೈದ್ಯೆ ಡಾ. ಅನುಷಾ ಆರ್. ಗುಪ್ತ ಅವರಿಗೆ 2026ನೇ ಸಾಲಿನ ‘ಜನಸಿರಿ ಬೆಸ್ಟ್ ವೈದ್ಯ ಸಾಹಿತಿ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಜೂನ್ 28ರ ಭಾನುವಾರದಂದು ನಗರದ ದಿ ಅಮರ ನಂದಿ ಲಿಂಕ್ ಗ್ರೌಂಡ್‌ನಲ್ಲಿ ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಭಜನಾ ಸಮ್ಮೇಳನದಲ್ಲಿ ಈ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಸೇವಾ ಮನೋಭಾವಕ್ಕೆ ಸಂದ ಗೌರವ ಡಾ. […]

2028ಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ಖಚಿತ: ಸಿಎಂ ಡಿ ಕೆ ಶಿವಕುಮಾರ್ ಭವಿಷ್ಯ

ಬೆಂಗಳೂರು : “2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು ಕಾಂಗ್ರೆಸ್ […]

ರಾಜ್ಯದಲ್ಲಿ ಗುಟ್ಕಾ ಬ್ಯಾನ್ ಎಚ್ಚರಿಕೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಭಾನುವಾರ ಮಾತನಾಡಿದರು. ಪಾನ್ ಮಸಾಲಾ, ಗುಟ್ಕಾ, ಅಡಿಕೆ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ […]