ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲಿನ ಗುಂಡಿನ ದಾಳಿ ಕುರಿತು ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ದೆಹಲಿಯಲ್ಲಿ ಜೂನ್ 20ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಮತ್ತು ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಗೃಹ ಸಚಿವರು ಸಂಸತ್ತಿನಲ್ಲಿ ಉತ್ತರಿಸಲಿದ್ದಾರೆ ಎಂಬ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿರುವ ಅವರು, “ನಮಗೆ ಅಮಿತ್ ಶಾ ಅವರ ಕಾಲ್ಪನಿಕ ಮಾತುಗಳಲ್ಲಿ ಆಸಕ್ತಿಯಿಲ್ಲ” ಎಂದು ಕಡಾಖಂಡಿತವಾಗಿ […]

ಕರ್ನಾಟಕ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿಯಾಗಿ MLC ಪುಟ್ಟಣ್ಣ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ನೂತನ ಸಭಾಪತಿಯನ್ನು ನಿಯಮಾನುಸಾರ ಆಯ್ಕೆ ಮಾಡುವವರೆಗೆ, ಸಭಾಪತಿ ಸ್ಥಾನದ ಕರ್ತವ್ಯಗಳನ್ನು ನಿರ್ವಹಿಸಲು ವಿಧಾನ ಪರಿಷತ್ ಸದಸ್ಯರಾದ (MLC) ಪುಟ್ಟಣ್ಣ ಅವರನ್ನು ನೇಮಕ ಮಾಡಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರು ಆದೇಶ ಹೊರಡಿಸಿದ್ದಾರೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯವು ಹೊರಡಿಸಿರುವ ವಿಶೇಷ ರಾಜ್ಯಪತ್ರದ ಅಧಿಕೃತ ಅಧಿಸೂಚನೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಲಾಗಿದೆ. ಭಾರತ ಸಂವಿಧಾನದ 184ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲರು ಈ ನಿರ್ಧಾರ […]

ಕೋಲಾರ ಭಾಗದ ರೈತರು, ರಾಜ್ಯಕ್ಕೆ ಮಾದರಿ: ಸಿಎಂ ಡಿ ಕೆ ಶಿವಕುಮಾರ್

ಕೋಲಾರ : “ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಎತ್ತಿನಹೊಳೆ […]

ರೇಣುಕಾಸ್ವಾಮಿ ಕೊಲೆ ಕೇಸ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌; ನಟ ದರ್ಶನ್‌ಗೆ ಮತ್ತೊಂದು ದೊಡ್ಡ ಹಿನ್ನಡೆ!

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್ ತೂಗುದೀಪ ಭಾಗಿಯಾಗಿರುವ ಬಹುಚರ್ಚಿತ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಪ್ರಕರಣದ 14ನೇ ಆರೋಪಿಯಾಗಿರುವ (A-14) ಪ್ರದೋಷ್‌ನನ್ನು ‘ಮಾಫಿ ಸಾಕ್ಷಿ’ಯಾಗಿ ಪರಿಗಣಿಸಲು ಬೆಂಗಳೂರಿನ 59ನೇ ಸಿಸಿಹೆಚ್ (ಸೆಷನ್ಸ್) ನ್ಯಾಯಾಲಯ ಅಧಿಕೃತ ಅನುಮತಿ ನೀಡಿದೆ. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಪ್ರದೋಷ್ ಮಾಫಿ ಸಾಕ್ಷಿಯಾಗುವುದಕ್ಕೆ ಇತರ ಯಾವುದೇ ಆರೋಪಿಗಳು ಆಕ್ಷೇಪ ಎತ್ತುವಂತಿಲ್ಲ” ಎಂದು ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿದ್ದ ಅರ್ಜಿಯನ್ನು ಪ್ರಾಸಿಕ್ಯೂಷನ್ […]

ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಲ್ಲಿ ದೊರೆಯಿತು ಬಿಗ್ ರಿಲೀಫ್‌

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅವರ ಜಾಮೀನು ಅರ್ಜಿಯಲ್ಲಿದ್ದ ಪ್ರಮುಖ ಪ್ರಯಾಣ ಷರತ್ತನ್ನು ಸಡಿಲಗೊಳಿಸಿ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ಬಿ. ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ, “ನ್ಯಾಯಾಲಯದ ಪೂರ್ವ […]

ಭಯ ಹುಟ್ಟಿಸಿ ಸಭಾಪತಿ ಹೊರಟ್ಟಿ ರಾಜೀನಾಮೆ ಪಡೆದಿದ್ದಾರೆ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದ್ದು, ಆಡಳಿತ ಪಕ್ಷದ ನಾಯಕರು ಗೂಂಡಾಗಳಂತೆ ವರ್ತಿಸಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ರಾಜೀನಾಮೆ ಪಡೆಯಲಾಗಿದ್ದು ಕಾನೂನು ಕ್ರಮ ಜರುಗಿಸಬೇಕು ಎಂದು ಮಾನ್ಯ ರಾಜ್ಯಪಾಲರಿಗೆ ದೂರು ಸಲ್ಲಿಸಿರುವುದಾಗಿ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಲೋಕಭವನದಲ್ಲಿ ನಿಯೋಗದ ಮೂಲಕ ದೂರು ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರ ರಾಜೀನಾಮೆಯನ್ನು ಒತ್ತಾಯವಾಗಿ ಪಡೆಯಲಾಗಿದೆ. […]

ರೈತರ ಜಮೀನುಗಳ ಮೇಲೆ ಕಣ್ಣು ಹಾಕಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

ಕೋಲಾರ: ರಾಜ್ಯದಾದ್ಯಂತ ಮಳೆಯ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬಿತ್ತನೆ ಮಾಡಿದ್ದರೂ ಕೈಗೆ ಬೆಳೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಟೊಮ್ಯಾಟೊ, ಮಾವು ಸೇರಿದಂತೆ ವಿವಿಧ ಬೆಳೆಗಳ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಕೋಲಾರ ಹೊರವಲಯದ ರತ್ನ ಕನ್ವೆನ್ಷನ್ ಹಾಲ್‌ನಲ್ಲಿ ಆಗ್ನೇಯ […]

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಮತಗಳ್ಳತನ ನಡೆಯುತ್ತಿದ್ದು, ಇದರ ವಿರುದ್ಧ ನಾವು ಕ್ವಿಟ್ ವೋಟ್ ಚೋರಿ ಚಳುವಳಿ ಮಾಡಬೇಕಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಭಾನುವಾರ ನಡೆದ ಕ್ವಿಟ್ ಇಂಡಿಯಾ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಮತದಾನದ ಹಕ್ಕು, ಬದುಕಿನ ಹಕ್ಕು, ಹೀಗಾಗಿ ಅದನ್ನು ಉಳಿಸಿಕೊಳ್ಳಿ “ನೀವು ಎಲ್ಲಾ ಕೆಲಸ ಬದಿಗಿಟ್ಟು ಮತಗಳ್ಳತನ ವಿರುದ್ಧ ಹೋರಾಟ ಮಾಡಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ರಾಜ್ಯದ ಕಾರ್ಯಕರ್ತರಲ್ಲಿ ಮನವಿ […]

‘ಕ್ಲೀನ್ ಅಪ್ ಬೆಂಗಳೂರು’: ಪಾದಚಾರಿ ಮಾರ್ಗಗಳ ಸ್ವಚ್ಛತೆಗೆ ಬೆಸ್ಕಾಂ ಬೃಹತ್ ಕಾರ್ಯಾಚರಣೆ!

ಬೆಂಗಳೂರು : ಸ್ವಚ್ಛ ಮತ್ತು ಸುರಕ್ಷಿತ ಬೆಂಗಳೂರು ನಿರ್ಮಾಣಕ್ಕಾಗಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (GBA) ಜೊತೆ ಕೈಜೋಡಿಸಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ನಗರದ ಜನರಿಗೆ ಸುರಕ್ಷಿತ ಪಾದಚಾರಿ ಮಾರ್ಗಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಸ್ವಚ್ಛತಾ ಆಂದೋಲನವನ್ನು ಕೈಗೊಂಡಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ (MD) ಡಾ. ಎನ್‌. ಶಿವಶಂಕರ ಅವರ ನೇತೃತ್ವದಲ್ಲಿ ಶನಿವಾರ ಸಾವಿರಾರು ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾದಚಾರಿ ಮಾರ್ಗಗಳಲ್ಲಿದ್ದ ಸ್ಥಗಿತಗೊಂಡ, ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ (ಟ್ರಾನ್ಸ್‌ಫಾರ್ಮರ್) ಕೇಂದ್ರಗಳು ಸೇರಿದಂತೆ ವಿವಿಧ ಪರಿಕರಗಳನ್ನು ತೆರವುಗೊಳಿಸಿದರು. […]

ಬಿಡದಿ ಟೌನ್ ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ಬಿಡದಿ ಟೌನ್ ಶಿಪ್ (ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆದೇಶಿಸಿದ್ದಾರೆ. ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್ ವಿ ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಯೋಜನೆಗೆ ಯಾರಿಂದಲೂ […]