ಹೊಸ ಮನೆಗೆ ಕರೆಂಟ್ ಕನೆಕ್ಷನ್ ನೀಡಲು ಲಂಚ ಕೇಳಿದ್ದ ಸೆಸ್ಕಾಂ ಅಧಿಕಾರಿ ಲೋಕಾಯುಕ್ತ ಲಾಕ್‌!

ಮಂಡ್ಯ: ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಸೆಸ್ಕಾಂ) ಮಂಡ್ಯ ನಗರ ಉಪ ವಿಭಾಗದ ಸಹಾಯಕ ಎಂಜಿನಿಯರ್ (AE) ಶ್ರೀನಿವಾಸ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊಸ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸಕ್ಕಾಗಿ ಇವರು ಭ್ರಷ್ಟಾಚಾರದ ಹಾದಿ ಹಿಡಿದಿದ್ದರು. ನಿಯಮ ಮೀರಿ ಸೌಲಭ್ಯ ಕೊಡುವ ಆಮಿಷ ಮನೆಗೆ ಅಧಿಕೃತವಾಗಿ ವಿದ್ಯುತ್ ಸಂಪರ್ಕ ನೀಡಲು ಹಾಗೂ ಇಲಾಖೆಗೆ ಪಾವತಿಸಬೇಕಾದ ನಿಯಮಾನುಸಾರ ಅಭಿವೃದ್ಧಿ ಶುಲ್ಕವನ್ನು ವಿನಾಯಿತಿ ಕೊಡಿಸುವುದಾಗಿ ನಂಬಿಸಿ ಎಇ ಶ್ರೀನಿವಾಸ್ ಅವರು ಅರ್ಜಿದಾರರಿಂದ 75 […]

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ, ಮಾತೃಶ್ರೀ ಚೆನ್ನಮ್ಮ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ವಿದಾಯ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (89) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಸೋಮವಾರ (ಜುಲೈ 20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣವಾಗಿ ನೆರವೇರಿತು. ಜೆಡಿಎಸ್ ಕುಟುಂಬದ ಹಿರಿಯ ಜೀವಕ್ಕೆ ಸಚಿವರು, ಮಠಾಧೀಶರು ಹಾಗೂ ಸಹಸ್ರಾರು ಅಭಿಮಾನಿಗಳು ಕಣ್ಣೀರಿನ ವಿದಾಯ ಹೇಳಿದರು. ಕಂಬನಿ ಮಿಡಿದ ದೇವೇಗೌಡರ ಕುಟುಂಬ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಕೌಟುಂಬಿಕ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಜರುಗಿಸಲಾಯಿತು. […]

ಭಾರತದ ಮೊದಲ ಡೆಂಗ್ಯೂ ಲಸಿಕೆ ‘ಕ್ಯೂಡೆಂಗಾ’ಗೆ DCGI ಅನುಮೋದನೆ

ನವದೆಹಲಿ: ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಆತಂಕ ಸೃಷ್ಟಿಸುತ್ತಿರುವ ಡೆಂಗ್ಯೂ ಜ್ವರಕ್ಕೆ ಭಾರತದಲ್ಲಿ ಕೊನೆಗೂ ಮೊದಲ ಲಸಿಕೆ ಲಭ್ಯವಾಗಿದೆ. ಜಪಾನ್ ಮೂಲದ ಪ್ರಸಿದ್ಧ ‘ಟಕೇಡಾ ಬಯೋಫಾರ್ಮಾಸ್ಯುಟಿಕಲ್ಸ್’ ಕಂಪನಿ ಅಭಿವೃದ್ಧಿಪಡಿಸಿರುವ ‘ಕ್ಯೂಡೆಂಗಾ’ (QDENGA) ಲಸಿಕೆಗೆ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (DCGI) ಮಾರುಕಟ್ಟೆ ಅನುಮೋದನೆ ನೀಡಿದೆ. ಈ ಮಹತ್ವದ ನಿರ್ಧಾರವು ದೇಶದ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ದೊಡ್ಡ ಮೈಲಿಗಲ್ಲಾಗಿದ್ದು, ಸೊಳ್ಳೆಗಳಿಂದ ಹರಡುವ ಈ ಮಾರಕ ಕಾಯಿಲೆಯ ವಿರುದ್ಧ ಹೋರಾಡಲು ಹೊಸ ಅಸ್ತ್ರ ಸಿಕ್ಕಂತಾಗಿದೆ. ಲಸಿಕೆಯ ವಯೋಮಿತಿ ಮತ್ತು ಡೋಸೇಜ್ ವಿವರ […]

253 ಖಾಲಿ ಇರುವ ಪಿಎಸ್‌ಐ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ!

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಯ ಕನಸು ಕಾಣುತ್ತಿರುವ ಯುವಜನತೆಗೆ ಇಲಾಖೆಯು ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಒಟ್ಟು 600 ಸಿವಿಲ್ ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ, ಸದ್ಯ ಖಾಲಿ ಇರುವ 253 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರು (DG&IGP) ಆದೇಶ ಹೊರಡಿಸಿದ್ದಾರೆ. ಜುಲೈ 16, 2026 ರಂದು ಹೊರಬಿದ್ದಿರುವ ಈ ಅಧಿಕೃತ ಪ್ರಕಟಣೆಯು ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಕಾಯುತ್ತಿರುವ ಅಭ್ಯರ್ಥಿಗಳಲ್ಲಿ ಹೊಸ ಉತ್ಸಾಹ ಮೂಡಿಸಿದೆ. […]

ಗ್ರಾಮ ಪಂಚಾಯಿತಿಯಿಂದ ಕಾರ್ಪೊರೇಷನ್ ವರೆಗೆ ಈ ಬಾರಿ ಯುವಕರಿಗೆ ಹಾಗೂ ಹೊಸಬರಿಗೆ ಅವಕಾಶ: ಡಿಕೆಶಿ

ನವದೆಹಲಿ: “ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಳೇ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಾರ್ಚ್  ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ “ಮತದಾರರ ಪಟ್ಟಿಯ ಸಮಗ್ರ […]

ರಾಜ್ಯದಲ್ಲಿ ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ತಂತ್ರಾಂಶ ಮತ್ತು ಸರ್ವರ್ ಸಮಸ್ಯೆಯಿಂದಾಗಿ ಸಾವಿರಾರು ಇ-ಸ್ವತ್ತು ಅರ್ಜಿಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ […]

ರಾಜ್ಯದಲ್ಲೂ ಸರ್ಕಾರಿ ನೌಕರರಿಗೆ ಸಿಜಿಎಚ್‌ಎಸ್ ವೈದ್ಯಕೀಯ ದರ ಪರಿಷ್ಕರಣೆಗೆ ಆದೇಶ!

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಆರೋಗ್ಯ ಹಿತರಕ್ಷಣೆಯ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲೇ ಚಿಕಿತ್ಸಾ ದರಗಳನ್ನು ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖ್ಯಮಂತ್ರಿಗಳು ಹಸಿರು ನಿಶಾನೆ ನೀಡಿದ್ದು, ಆರ್ಥಿಕ ಇಲಾಖೆಯು ಸಿ.ಜಿ.ಹೆಚ್.ಎಸ್. (CGHS) ದರ ಪರಿಷ್ಕರಣೆಯ ಅಧಿಕೃತ ಆದೇಶ ಹೊರಡಿಸಿದೆ. ನಗದುರಹಿತ ‘ಆರೋಗ್ಯ ಸಂಜೀವಿನಿ’ಗೆ ಹೊಸ ಚುರುಕು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜಾರಿಗೆ ತಂದಿದ್ದ 2025ರ ನೂತನ […]

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2400 ಕೋಟಿ ಬಿಡುಗಡೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 24,00ಕೋಟಿ ರೂ. ಹಣ ಬಿಡುಗಡೆ ಆಗಿದೆ.  1,24,48,000 ಕುಟುಂಬದ ಮನೆಯ ಯಜಮಾನಿಯರಿಗೆ 30 ಕಂತುಗಳಲ್ಲಿ ತಲಾ 2000 ರೂ.ಗಳಂತೆ 60,000 ರೂ.ಗಳನ್ನು ಡಿಬಿಟಿ ಮುಖಾಂತರ ಜಮೆ ಮಾಡಲಾಗಿತ್ತು. ಈಗ 31ನೇ ಕಂತಿನ 24,00ಕೋಟಿ ರೂ. ಹಣ ಬಿಡುಗಡೆ ಆಗಿದೆ.  ಈ ಮೂಲಕ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ಇದುವರೆಗೂ 74,650 ಕೋಟಿ ರೂ.ಗಳನ್ನು ವ್ಯಯಿಸಿದೆ. ಇದರಿಂದ ಒಬ್ಬ ಮನೆ ಯಜಮಾನಿ ಖಾತೆಗೆ […]

ನ್ಯೂಜಿಲೆಂಡ್‌ನಲ್ಲಿ 5.9 ತೀವ್ರತೆಯಲ್ಲಿ ಪ್ರಬಲ ಭೂಕಂಪ

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ದಕ್ಷಿಣ ದ್ವೀಪದಲ್ಲಿ (South Island) ಗುರುವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ಕರಾವಳಿ ಪ್ರದೇಶಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ರಿಕ್ಟರ್ ಮಾಪಕದಲ್ಲಿ 5.9 ರಷ್ಟು ತೀವ್ರತೆ ದಾಖಲಾಗಿರುವ ಈ ಭೂಕಂಪದ ಬೆನ್ನಲ್ಲೇ, ಅಧಿಕಾರಿಗಳು ಆರಂಭದಲ್ಲಿ ಸುನಾಮಿ ಮುನ್ನೆಚ್ಚರಿಕೆಯನ್ನು ಹೊರಡಿಸಿದ್ದರು. ಪ್ರವಾಸಿ ತಾಣದ ಬಳಿ ಕೇಂದ್ರಬಿಂದು ನ್ಯೂಜಿಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣವಾದ ‘ಫಿಯೋರ್ಡ್‌ಲ್ಯಾಂಡ್’ನ ಹೆಬ್ಬಾಗಿಲು ಎನಿಸಿಕೊಂಡಿರುವ ‘ತೇ ಅನಾವು’ (Te Anau) ಪಟ್ಟಣದ ಉತ್ತರಕ್ಕೆ ಸುಮಾರು 40 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಇತ್ತೆಂದು ನ್ಯೂಜಿಲೆಂಡ್‌ನ […]

ಕಾಣಿಗೆ ಹಣ ದೇವಾಲಯದ ಅಭಿವೃದ್ಧಿಗೆ ಮಾತ್ರವೇ ಬಳಕೆ : ಡಿಸಿಎಂ ಡಾ.ಜಿ.ಪರಮೇಶ್ವರ

ಶಿವಮೊಗ್ಗ: ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 39 ಸಾವಿರ ದೇವಸ್ಥಾನಗಳಿವೆ. ‘ಎ’ ವರ್ಗದ ದೇವಸ್ಥಾನಗಳಿಗೆ ಸಾಕಷ್ಟು ಹಣ ಬರುತ್ತಿದೆ. ಭಕ್ತರು ಹುಂಡಿಗಳಲ್ಲಿ ಕಾಣಿಕೆಯನ್ನು ಹಾಕುತ್ತಾರೆ. ಹೀಗಾಗಿ ಪ್ರತಿಯೊಂದು ಹುಂಡಿ ಮೇಲೆ ನಿಗಾವಹಿಸಲು 4 ಕಡೆಗಳಿಂದ ಸಿಸಿಟಿವಿ ಅಳವಡಿಸಿ, ಕೇಂದ್ರ ಕಚೇರಿಯಿಂದ ನಿಗಾವಹಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಮಾಧ್ಯಮಕ್ಕೆ ತಿಳಿಸಿದರು.  ದೇವಸ್ಥಾನಗಳನ್ನು ಸಂಪೂರ್ಣವಾಗಿ ಸಿಸಿಟಿವಿ ಮೂಲಕ ನಿಗಾವಹಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್‌) ಮಾಡಲಾಗುವುದು.‌ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಕಳ್ಳತನ […]