ದಳಪತಿ ವಿಜಯ್ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆ ದಿನಾಂಕ ಫಿಕ್ಸ್! ಜುಲೈ.23ಕ್ಕೆ ವಿಶ್ವದಾದ್ಯಂತ ರಿಲೀಸ್

ಚೆನ್ನೈ: ಕಳೆದ ಏಳು ತಿಂಗಳುಗಳಿಂದ ಬಿಡುಗಡೆಯ ಭಾಗ್ಯ ಕಾಣದೆ ಕಾನೂನು ಕಸರತ್ತುಗಳಲ್ಲಿ ಸಿಲುಕಿದ್ದ ಕಾಲಿವುಡ್ ಸುಪರ್ ಸ್ಟಾರ್ ವಿಜಯ್ ಅವರ ಹೈ-ವೋಲ್ಟೇಜ್ ಸಿನಿಮಾ ‘ಜನ ನಾಯಕನ್’ (Jana Nayagan) ಕೊನೆಗೂ ರಿಲೀಸ್ಗೆ ಹಸಿರು ನಿಶಾನೆ ಪಡೆದುಕೊಂಡಿದೆ. ಎಲ್ಲಾ ಅಡೆತಡೆಗಳನ್ನು ಯಶಸ್ವಿಯಾಗಿ ದಾಟಿರುವ ಚಿತ್ರತಂಡ, ಜುಲೈ 23 ರಂದು ಜಾಗತಿಕವಾಗಿ ಸಿನಿಮಾವನ್ನು ತೆರೆಗೆ ತರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಯೊಂದಿಗಿನ ಸುದೀರ್ಘ ಜಟಾಪಟಿ ಹಾಗೂ ಕೋರ್ಟ್ ಮೆಟ್ಟಿಲೇರಿದ್ದ ವಿವಾದಕ್ಕೆ ಈಗ ಪೂರ್ಣವಿರಾಮ ಬಿದ್ದಿದೆ. […]
ಬಿಡದಿ ಟೌನ್ಶಿಪ್ ನನ್ನ ಕನಸಿನ ಯೋಜನೆಯಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: “ನನಗೆ ಯಾವುದೇ ಟೌನ್ಶಿಪ್ ಯೋಜನೆಯ ಕ್ರೆಡಿಟ್ ಬೇಕಾಗಿಲ್ಲ. ನಾನು ಕೃಷಿಕನ ಮಗ, ಅನ್ನದಾತರು ತೋರಿಸಿದ ಹಾದಿಯಲ್ಲೇ ಸಾಗುತ್ತಿದ್ದೇನೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಿಧಾನಸೌಧದಲ್ಲಿ ಹರಿಹಾಯ್ದಿದ್ದಾರೆ. ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಎಚ್.ಡಿ. ಕುಮಾರಸ್ವಾಮಿ ಅವರು ನಡೆಸುತ್ತಿರುವ ಪ್ರತಿಭಟನಾ ಧರಣಿ ಹಾಗೂ ನಿನ್ನೆ ಬಿಡದಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಕುರಿತು ಮುಖ್ಯಮಂತ್ರಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದು ಹಿಂದಿನ ಸರ್ಕಾರದ ನಿರ್ಧಾರ, ನನ್ನ ಕನಸಲ್ಲ! ಸುದ್ದಿಗಾರರೊಂದಿಗೆ ಮಾತನಾಡಿದ […]
ಬಿಡದಿ ಟೌನ್ ಶಿಪ್ ಯೋಜನೆ ವಿವಾದ: ಸ್ವ-ಇಚ್ಛೆಯಿಂದ ಕೊಟ್ರೆ ಭೂಸ್ವಾಧೀನ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿಂದು ಪ್ರಮುಖ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಲು ಮತ್ತು ಅನ್ನದಾತರ ಅಹವಾಲುಗಳನ್ನು ಆಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ. ಯೋಜನೆ ಬೇಕೋ, ಬೇಡವೋ? ಸಮಿತಿ ನಿರ್ಧಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಬಿಡದಿ ಯೋಜನೆಯ ಕುರಿತು ಉದ್ಭವಿಸಿರುವ ಗೊಂದಲಗಳಿಗೆ ತೆರೆ ಎಳೆಯಲು ಸಮಿತಿ ರಚಿಸಲಾಗುತ್ತಿದೆ. ಈ ಸಮಿತಿಯು ನೇರವಾಗಿ ಸ್ಥಳೀಯ ರೈತರನ್ನು […]
ರಾಜ್ಯ ಸಂಪುಟ ವಿಸ್ತರಣೆಗೆ ಚುರುಕು: ನಾಳೆ ದೆಹಲಿಗೆ ಸಿಎಂ ಡಿಕೆಶಿ, ಮಾಜಿ ಸಿಎಂ ಸಿದ್ಧರಾಮಯ್ಯ ಪಯಣ

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆಯ ಪ್ರಕ್ರಿಯೆಗಳಿಗೆ ಕೊನೆಗೂ ಚಾಲನೆ ಸಿಕ್ಕಿದೆ. ಹೈಕಮಾಂಡ್ ಜೊತೆಗಿನ ಉನ್ನತ ಮಟ್ಟದ ಮಾತುಕತೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನೊಳಗೊಂಡ ರಾಜ್ಯ ನಾಯಕರ ತಂಡ ಇಂದು ರಾತ್ರಿ ದೆಹಲಿ ತಲುಪಲಿದೆ. ನಾಳೆ ಪ್ರಾಥಮಿಕ ಸುತ್ತಿನ ಹೈಕಮಾಂಡ್ ಸಭೆ ದೆಹಲಿಯಲ್ಲಿ ನಾಳೆ ಮೊದಲ ಹಂತದ ಮಹತ್ವದ ಸಭೆ ಆಯೋಜನೆಯಾಗಿದ್ದು, ಎಐಸಿಸಿ ನಾಯಕರು ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆ […]
ರಾಜ್ಯದ ಗ್ರಾಮ ಪಂಚಾಯ್ತಿ PDO, ಕಾರ್ಯದರ್ಶಿ, ಲೆಕ್ಕಸಹಾಯಕರ ವರ್ಗಾವಣೆಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ

ಬೆಂಗಳೂರು : ರಾಜ್ಯದಲ್ಲಿರುವ 5927 ಗ್ರಾಮಪಂಚಾಯತಿ ವ್ಯಾಪ್ತಿಯ ಎಲ್ಲ ಹಳ್ಳಿಗಳನ್ನೂ ಆದರ್ಶ ಗ್ರಾಮಗಳನ್ನಾಗಿ ಪರಿವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪಂಚಾಯ್ತಿ ಸಿಬ್ಬಂದಿಗೆ ಕರೆ ನೀಡಿದ್ದಾರೆ. ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತಾಲಯದಲ್ಲಿಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಪಾದರ್ಶಕ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತ ಹಳ್ಳಿಗಳ ದೇಶ. ಹಳ್ಳಿಗಳು ಭಾರತದ ಜೀವನಾಡಿ. ಆದರೆ ಇಂದು ಗ್ರಾಮೀಣ ಯುವಕರು […]
ಸಚಿವ ಜಮೀರ್ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ ಕಡತ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ ರಾಜ್ಯಪಾಲರು!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧದ ಕಾನೂನು ತನಿಖೆಯ ಪ್ರಕ್ರಿಯೆಗೆ ಸದ್ಯ ತಾತ್ಕಾಲಿಕ ತಡೆ ಬಿದ್ದಿದೆ. ಅವರ ವಿರುದ್ಧ ಪ್ರಾಸಿಕ್ಯೂಷನ್ (ವಿಚಾರಣೆ) ನಡೆಸಲು ಅನುಮತಿ ಕೋರಿ ಸಲ್ಲಿಕೆಯಾಗಿದ್ದ ಮಹತ್ವದ ಕಡತವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ಸಚಿವ ಜಮೀರ್ ಅವರಿಗೆ ಸದ್ಯದ ಮಟ್ಟಿಗೆ ದೊಡ್ಡ ಆಡಳಿತಾತ್ಮಕ ನೆಮ್ಮದಿ ಸಿಕ್ಕಂತಾಗಿದೆ. ಲೋಕಾಯುಕ್ತ ತನಿಖಾ ಸಂಸ್ಥೆಯು ಸಚಿವರ ವಿರುದ್ಧ […]
ಆರೋಗ್ಯ ಮಾಹಿತಿ ಕ್ಷೇತ್ರದಿಂದ ಪ್ರಕಾಶನ ರಂಗಕ್ಕೆ ‘ಹ್ಯಾಪಿಯೆಸ್ಟ್ ಹೆಲ್ತ್’ ಲಗ್ಗೆ; ನಾಲೆಡ್ಜ್ ಬಿಸಿನೆಸ್ ಮುಖ್ಯಸ್ಥರಾಗಿ ರಘು ಕೃಷ್ಣನ್ ಅಧಿಕಾರ ಸ್ವೀಕಾರ

ಬೆಂಗಳೂರು: ವೈದ್ಯಕೀಯ ಲೋಕದ ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಆಧಾರಿತ ಮಾಹಿತಿಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತಿರುವ ‘ಹ್ಯಾಪಿಯೆಸ್ಟ್ ಹೆಲ್ತ್’ ಸಂಸ್ಥೆಯು ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಸಂಸ್ಥೆಯ ಭವಿಷ್ಯದ ಆಡಳಿತಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ‘ನಾಲೆಡ್ಜ್ ಬಿಸಿನೆಸ್’ (ಜ್ಞಾನ ವಿಭಾಗ) ಮಾರುಕಟ್ಟೆಗೆ ಹೊಸ ನಾಯಕತ್ವವನ್ನು ಘೋಷಿಸಲಾಗಿದ್ದು, ಹಿರಿಯ ಪತ್ರಕರ್ತ ರಘು ಕೃಷ್ಣನ್ ಅವರನ್ನು ನೂತನ ಸಿಇಒ ಹಾಗೂ ಮುಖ್ಯ ಸಂಪಾದಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಸ್ಥೆಯು ಅಧಿಕೃತವಾಗಿ ಪುಸ್ತಕ ಪ್ರಕಾಶನ ಕ್ಷೇತ್ರಕ್ಕೂ ಪಾದಾರ್ಪಣೆ ಮಾಡಿದೆ. ಕಳೆದ 2022ರಲ್ಲಿ ಆರಂಭವಾದ ಹ್ಯಾಪಿಯೆಸ್ಟ್ ಹೆಲ್ತ್ನ […]
ಭಾರತದ ಬಿಗ್ ಸ್ಟೆಪ್: ಬಲವಂತದ ಕಾರ್ಮಿಕರ ಬಳಕೆಯ ವಿದೇಶಿ ಸರಕುಗಳ ಆಮದು ಸಂಪೂರ್ಣ ನಿಷೇಧ!

ನವದೆಹಲಿ: ಅಮೆರಿಕ ವಿಧಿಸಲು ಯೋಜಿಸಿರುವ ಹೆಚ್ಚುವರಿ ಸುಂಕದ (Tariff) ಭೀತಿಯಿಂದ ಪಾರಾಗುವ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಬಲವಂತದ ದುಡಿತ ಅಥವಾ ಕಡ್ಡಾಯ ಕಾರ್ಮಿಕ ಪದ್ಧತಿಯನ್ನು (Forced Labour) ಬಳಸಿ ತಯಾರಿಸಲಾದ ವಿದೇಶಿ ಸರಕುಗಳ ಆಮದನ್ನು ಭಾರತ ಸರ್ಕಾರ ಅಧಿಕೃತವಾಗಿ ನಿಷೇಧಿಸಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ. ಬಲವಂತದ ಕಾರ್ಮಿಕ ಪದ್ಧತಿಯ ಮೂಲಕ ಉತ್ಪಾದನೆಯಾಗುವ ಸರಕುಗಳ ಆಮದನ್ನು ತಡೆಗಟ್ಟಲು ವಿಫಲವಾಗಿರುವ ಹಿನ್ನೆಲೆಯಲ್ಲಿ, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇಕಡಾ […]
ತಿರುಮಲ ಪ್ರಥಮ ಆರತಿ ಸ್ವೀಕಾರದ ಸಿಎಂ ಡಿಕೆಶಿ ಹೊಸ ಶಿಷ್ಟಾಚಾರ ಪ್ರಸ್ತಾಪ ಸ್ವಾಗತಾರ್ಹ: ಟಿಟಿಡಿ ಸದಸ್ಯ ಎಸ್. ನರೇಶ್ ಕುಮಾರ್

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಗೆ ನೆರವೇರಿಸುವ ಪ್ರಥಮ ಆರತಿ ಸ್ವೀಕಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಹೊಸ ಶಿಷ್ಟಾಚಾರ ವ್ಯವಸ್ಥೆ ಐತಿಹಾಸಿಕ ಪರಂಪರೆಗೆ ಗೌರವ ಸಲ್ಲಿಸುವ ಮಹತ್ವದ ಹೆಜ್ಜೆಯಾಗಿದ್ದು, ಇದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಆದರೆ, ಈ ಗೌರವವನ್ನು ಕೇವಲ ರಾಜಕೀಯ ಪ್ರತಿನಿಧಿಗಳಿಗೆ ಮಾತ್ರ ಸೀಮಿತಗೊಳಿಸದೆ, ಆ ದಿನ ತಿರುಮಲದಲ್ಲಿ ಉಪಸ್ಥಿತರಿರುವ ಕರ್ನಾಟಕದ ಪ್ರಮುಖ ಗಣ್ಯರೊಬ್ಬರಿಗೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಶಿಷ್ಟಾಚಾರ ರೂಪಿಸುವುದು ಸೂಕ್ತ ಎಂದು ಟಿಟಿಡಿ ಆಡಳಿತ ಮಂಡಳಿ ಸದಸ್ಯ […]
ಬಿಡದಿ ರೈತರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ

ಬೆಂಗಳೂರು: ಭಾರತ್ ಜೋಡೋ ಯುವ ಸಂಘಗಳ ಹೆಸರಲ್ಲಿ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಗಂಜಿ ಕೇಂದ್ರಗಳನ್ನು ನಿರ್ಮಿಸಲು ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ, ವೃದ್ಧರಿಗೆ, ಅನಾಥರಿಗೆ, ವಿಧವೆಯರಿಗೆ ಪಿಂಚಣಿ ಫಲಾನುಭವಿಗಳಿಗೆ ಸಹಾಯಧನ ನೀಡದೆ ತಡೆಹಿಡಿದಿರುವ ಸರ್ಕಾರ, ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ರಾಜ್ಯದ ತೆರಿಗೆದಾರರ ಹಣದಲ್ಲಿ ಪುನರ್ವಸತಿ ಕಲ್ಪಿಸುತ್ತಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಹರಿಹಾಯ್ದರು. ಗೃಹಲಕ್ಷ್ಮಿಯ 5,000 ಕೋಟಿ ರೂ. ಅನ್ನಭಾಗ್ಯದ 750 ಕೋಟೊ ಹಣವನ್ನು ಇನ್ನೂ ನೀಡಿಲ್ಲ. ಆಗಿನ ಸಚಿವೆ […]