ಕುವೆಂಪು ವಿರಚಿತ ನಾಡಗೀತೆಯಲ್ಲಿ ಬದಲಾವಣೆ! ಇಷ್ಟು ದಿನ ಬಿಟ್ಟಿದ್ದ ಆ ಪದ ಮತ್ತೆ ಸೇರ್ಪಡೆ!

ಬೆಂಗಳೂರು: ಕನ್ನಡಿಗರ ಶ್ರೀಮಂತ ಇತಿಹಾಸ ಮತ್ತು ಭೌಗೋಳಿಕ ವೈವಿಧ್ಯತೆಯನ್ನು ಸಾರುವ ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ‘ ನಾಡಗೀತೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಇಷ್ಟು ದಿನಗಳ ಕಾಲ ನಾಡಗೀತೆಯಲ್ಲಿ ಕೈಬಿಡಲಾಗಿದ್ದ ಬೌದ್ಧ ಧರ್ಮದ ಹೆಸರನ್ನು ಮತ್ತೆ ಸೇರ್ಪಡೆಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ನೇತೃತ್ವದ ಸಮಿತಿಯು ಸರ್ಕಾರಕ್ಕೆ ಪ್ರಮುಖ ಸಲಹೆ ನೀಡಿದೆ. ಪ್ರಸ್ತುತ ದಿನಗಳಲ್ಲಿ ಬೌದ್ಧ ಧರ್ಮದ ಸಾಂಸ್ಕೃತಿಕ ಪ್ರಚಲಿತತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಮಹತ್ವದ […]
ಜಿಯೋದಿಂದ ಮತ್ತೊಂದು ಧಮಾಕ: ಜಸ್ಟ್ 400 ರೂಪಾಯಿಯಲ್ಲಿ ಹೋಂ ಲೈವ್ ಟಿವಿ ಪ್ಯಾಕ್ ರಿಲೀಸ್

ಬೆಂಗಳೂರು : ರಿಲಯನ್ಸ್ ಜಿಯೋ, ಇಂದು ಜಿಯೋ ಹೋಮ್ ಟಿವಿ ಪ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಇದು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್ ಗಳನ್ನು ಗ್ರಾಹಕರಿಗೆ ತಿಂಗಳಿಗೆ ಕೇವಲ 400 ರೂ.ಗಳಿಗೆ (ಎಲ್ಲವನ್ನೂ ಒಳಗೊಂಡಂತೆ) ನೀಡುತ್ತದೆ. ಇದು ಪ್ರೀಮಿಯಂ ಟೆಲಿವಿಷನ್ ಮನರಂಜನೆಯನ್ನು ಹಿಂದೆಂದಿಗಿಂತಲೂ ಹೆಚ್ಚು ಆನಂದಿಸುವಂತೆ ಮಾಡುತ್ತದೆ. ಹೊಸ ಪ್ಯಾಕ್, ಗ್ರಾಹಕರ ಆದ್ಯತೆಯ ಭಾಷೆಗಳಲ್ಲಿ ಮನರಂಜನೆ, ಚಲನಚಿತ್ರಗಳು, ಕ್ರೀಡೆಗಳು, ಸುದ್ದಿ, ಮಕ್ಕಳು, ಸಂಗೀತ ಮತ್ತು ಪ್ರಾದೇಶಿಕ ವಿಷಯ ಸೇರಿದಂತೆ ಎಲ್ಲಾ ಪ್ರಮುಖ ಪ್ರಸಾರಕರು ಮತ್ತು […]
ಡಿಜಿಪಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ: ನಕಲಿ, ಆರ್ಟಿಐ ಪತ್ರಕರ್ತರ ಮೇಲೆ ಕ್ರಮಕ್ಕೆ ಮನವಿ

ಬೆಂಗಳೂರು: ನೈಜ ಪತ್ರಕರ್ತರ ಮೇಲೆ ವಿನಾ ಕಾರಣ ತೇಜೋವಧೆ ಮಾಡುವ ನಕಲಿ ಮತ್ತು ಆರ್ಟಿಐ ಪತ್ರಕರ್ತರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಪೊಲೀಸ್ ಮಹಾ ನಿರ್ದೇಶಕರನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಈ ಬಗ್ಗೆ ಮನವಿ ಸಲ್ಲಿಸಿತು. ಪತ್ರಿಕೆಗಳನ್ನೆ ತರದವರು, ಸುದ್ದಿಯನ್ನು […]
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ನಿರ್ದೇಶಕರು ಒಳಗೊಂಡಂತೆ) ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ವೇಳಾಪಟ್ಟಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು / […]
ಆಧಾರ್ ಆ್ಯಪ್ ಮೂಲಕ ಇ-ಮೇಲ್ ಅಪ್ಡೇಟ್ಗೆ UIDAI ಅವಕಾಶ; ಡಿ.31ರವರೆಗೆ ಸಂಪೂರ್ಣ ಉಚಿತ ಸೇವೆ

ನವದೆಹಲಿ: ಆಧಾರ್ ವಿವರಗಳನ್ನು ನವೀಕರಿಸುವ ಪ್ರಕ್ರಿಯೆಯನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಮತ್ತಷ್ಟು ಸರಳಗೊಳಿಸಿದೆ. ಆಧಾರ್ ಕಾರ್ಡ್ದಾರರು ಇನ್ನು ಮುಂದೆ ಆಧಾರ್ ಸೇವಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡುವ ಅಗತ್ಯವಿಲ್ಲದೆ, ನೇರವಾಗಿ ಅಧಿಕೃತ ಆಧಾರ್ ಆ್ಯಪ್ ಮೂಲಕವೇ ತಮ್ಮ ಇ-ಮೇಲ್ ಐಡಿಯನ್ನು ಸೇರಿಸಲು ಅಥವಾ ನವೀಕರಿಸಲು ಹೊಸ ವೈಶಿಷ್ಟ್ಯವನ್ನು ಪರಿಚಯಿಸಲಾಗಿದೆ. ಈ ನೂತನ ಡಿಜಿಟಲ್ ಸೇವೆಯು ಜುಲೈ 1, 2026 ರಿಂದ ಜಾರಿಗೆ ಬಂದಿದ್ದು, ಮುಂದಿನ ಆರು ತಿಂಗಳವರೆಗೆ ಅಂದರೆ ಡಿಸೆಂಬರ್ 31, 2026 ರವರೆಗೆ […]
2020ರ ದೆಹಲಿ ಗಲಭೆ ಕೇಸ್: ತಾಹೀರ್ ಹುಸೇನ್ ಸೇರಿದಂತೆ ಐವರು ದೋಷಿಯೆಂದು ಕೋರ್ಟ್ ತೀರ್ಪು

ನವದೆಹಲಿ: 2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಕೋಮು ಗಲಭೆಯ ವೇಳೆ ಗುಪ್ತಚರ ಇಲಾಖೆಯ (IB) ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಕಾರ್ಕರ್ಡೂಮಾ ನ್ಯಾಯಾಲಯವು ಸೋಮವಾರ (ಜುಲೈ 13, 2026) ಮಹತ್ವದ ತೀರ್ಪು ನೀಡಿದೆ. ಆಮ್ ಆದ್ಮಿ ಪಕ್ಷದ (AAP) ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಸೇರಿದಂತೆ ಐವರು ಆರೋಪಿಗಳನ್ನು ನ್ಯಾಯಾಲಯವು ದೋಷಿ ಎಂದು ಘೋಷಿಸಿದೆ. ಕಾರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಪ್ರವೀಣ್ ಸಿಂಗ್ ಅವರು ಈ ತೀರ್ಪನ್ನು […]
ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ರಾಜ್ಯ ಸರ್ಕಾರದ ಸ್ಪಷ್ಟನೆ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ […]
ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವ ಬಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು : “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ […]
ರಾಜ್ಯದ 13 ರೋಪ್ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಸಚಿವ ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ವಿವಿಧ ರೋಪ್ವೇ ಯೋಜನೆಗಳ […]
ಪೋಕ್ಸೋ ಪ್ರಕರಣ: ವಚನಾನಂದ ಸ್ವಾಮೀಜಿಗೆ ಷರತ್ತುಬದ್ಧ ಜಾಮೀನು ಮಂಜೂರು

ದಾವಣಗೆರೆ: ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪದ ಸುಳಿಗೆ ಸಿಲುಕಿದ್ದ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಯಶಸ್ಸು ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಮೊಕದ್ದಮೆಗೆ ಸಂಬಂಧಿಸಿದಂತೆ ದಾವಣಗೆರೆಯ ಪೋಕ್ಸೋ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ತೀರ್ಪಿನಿಂದಾಗಿ ಬಂಧನದ ಭೀತಿಯಲ್ಲಿದ್ದ ಸ್ವಾಮೀಜಿಯವರಿಗೆ ಸದ್ಯಕ್ಕೆ ಭಾರಿ ನೆಮ್ಮದಿ ಸಿಕ್ಕಂತಾಗಿದೆ. ಮಠದಲ್ಲಿ ಅಸಭ್ಯ ವರ್ತನೆ ಆರೋಪ: ಗದಗದಲ್ಲಿ ದಾಖಲಾಗಿತ್ತು ಎಫ್ಐಆರ್ ಮಠದ […]