ದೇವಸ್ಥಾನಗಳ ಹಣ ದುರುಪಯೋಗ ತಡೆಯಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಆಸ್ತಿಪಾಸ್ತಿ, ನಗದು ಹಣ ಮತ್ತು ಚಿನ್ನಾಭರಣಗಳ ರಕ್ಷಣೆಗಾಗಿ ಅತ್ಯಂತ ಕಟ್ಟುನಿಟ್ಟಿನ ಹೊಸ ‘ಪ್ರಮಾಣಿತ ಕಾರ್ಯಾಚರಣೆ ವಿಧಾನ’ವನ್ನು (SOP) ಜಾರಿಗೆ ತಂದಿದೆ. ದೇಶದ ನಾನಾ ಭಾಗಗಳಲ್ಲಿ ಧಾರ್ಮಿಕ ಕೇಂದ್ರಗಳ ಹುಂಡಿ ಕಳ್ಳತನ ಮತ್ತು ಕಾಣಿಕೆ ಹಣ ದುರುಪಯೋಗವಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಭದ್ರತೆ ಮತ್ತು ತಂತ್ರಜ್ಞಾನ ಆಧಾರಿತ ಮುಂಜಾಗ್ರತಾ ಕ್ರಮಗಳು […]

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : “ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನ ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ […]

ಗಾನ ಕೋಗಿಲೆ ಎಸ್.ಜಾನಕಿ ಪಂಚಭೂತಗಳಲ್ಲಿ ಲೀನ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

ಮೈಸೂರು: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ‘ಗಾನಕೋಗಿಲೆ’ ಎಸ್. ಜಾನಕಿ ಅವರ ಅಂತ್ಯಸಂಸ್ಕಾರವು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಶಾಸ್ತ್ರೋಕ್ತವಾಗಿ ನೆರವೇರಿತು. ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಸಕಲ ಪೊಲೀಸ್ ಗೌರವಗಳನ್ನು ಸಲ್ಲಿಸುವ ಮೂಲಕ ಸಂಗೀತ ಲೋಕದ ಮಹಾನ್ ಚೇತನಕ್ಕೆ ಭಾವುಕ ವಿದಾಯ ಹೇಳಲಾಯಿತು. ಚಿತೆಗೆ ಅಗ್ನಿಸ್ಪರ್ಶ ಮಾಡಿದ ಮೊಮ್ಮಗಳು ಅಪ್ಸರಾ: ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು […]

ಬೆಂಗಳೂರಲ್ಲಿ ಶೌಚಕ್ಕೆ ಹೋಗಬೇಕೆಂದು ಒಂಟಿ ಮಹಿಳೆ ಮನೆಗೆ ನುಗ್ಗಿ, ಗುಪ್ತಾಂಗ ತೋರಿಸಿದ್ದ ಡೆಲಿವರಿ ಬಾಯ್‌ ಅರೆಸ್ಟ್‌

ಬೆಂಗಳೂರು: ಇಲ್ಲಿನ ಮಾರತ್ತಹಳ್ಳಿಯಲ್ಲಿ ಆರ್ಡರ್ ತಲುಪಿಸಲು ಬಂದ ಡೆಲಿವರಿ ಬಾಯ್ ಒಬ್ಬ, ಒಂಟಿ ಮಹಿಳೆಯ ಮನೆಗೆ ಅತಿಕ್ರಮವಾಗಿ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಮಾರತ್ತಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಜಯ್ ಮಲ್ಲಿಕಾರ್ಜುನ್ ಕಾಮತ್ ಬಂಧಿತ ಡೆಲಿವರಿ ಬಾಯ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಮಾರತಹಳ್ಳಿಯ ಅಪಾರ್ಟ್‌ಮೆಂಟ್‌ ಒಂದಕ್ಕೆ ಪಾರ್ಸೆಲ್ ನೀಡಲು ಬಂದಿದ್ದ ಆರೋಪಿ, ಶೌಚಾಲಯ ಬಳಸಲು ಅನುಮತಿ ಕೇಳಿದ್ದಾನೆ. ಆದರೆ ಮನೆಯಲ್ಲಿ ತಾವು […]

ಮಾಜಿ ಶಾಸಕ, ಹಿರಿಯ ರಾಜಕಾರಣಿ ಸೈಯದ್ ಯಾಸಿನ್ ವಿಧಿವಶ

ಬೆಂಗಳೂರು: ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಸೈಯದ್ ಯಾಸಿನ್ (70) ಅವರು ಭಾನುವಾರ (ಜುಲೈ 12) ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಮಾಜಿ ಕೇಂದ್ರ ಸಚಿವ ದಿವಂಗತ ಸಿ.ಕೆ. ಜಾಫರ್ ಶರೀಫ್ ಅವರ ಅಳಿಯರಾಗಿದ್ದಾರೆ. ಸೈಯದ್ ಯಾಸಿನ್ ಅವರು ತಮ್ಮ ಪತ್ನಿ ಹಾಗೂ ನಾಲ್ವರು ಪುತ್ರರನ್ನು ಒಳಗೊಂಡ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದು ಸಂಜೆ […]

ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಇನ್ನಿಲ್ಲ

ಮೈಸೂರು: ಖ್ಯಾತ ಹಿನ್ನಲೆ ಗಾಯಕಿ, ಗಾನ ಕೋಗಿಲೆ ಎಸ್.ಜಾನಕಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಎಸ್. ಜಾನಕಿ (ಶಿಷ್ಟಾಲ ಜಾನಕಿ) ಅವರ ಹೆಸರು ಸುವರ್ಣಾಕ್ಷರಗಳಲ್ಲಿ ಬರೆಯುವಂಥದ್ದು. ತಮ್ಮ ಸುಮಧುರ ಧ್ವನಿ ಹಾಗೂ ವಿಶಿಷ್ಟ ಗಾಯನ ಶೈಲಿಯ ಮೂಲಕ ಕೋಟ್ಯಂತರ ರಸಿಕರ ಹೃದಯ ಗೆದ್ದಿರುವ ಅವರು, ದಕ್ಷಿಣ ಭಾರತದ ಪ್ರಮುಖ ಗಾನಕೋಗಿಲೆಯಾಗಿದ್ದಾರೆ. ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ ಭಾರತದ ವಿವಿಧ ಭಾಷೆಗಳಲ್ಲಿ ಮಾತ್ರವಲ್ಲದೆ ಜಪಾನಿ, ಅರೇಬಿಕ್, ಲ್ಯಾಟಿನ್ ನಂತಹ ವಿದೇಶಿ ಭಾಷೆಗಳನ್ನೂ ಒಳಗೊಂಡು ಒಟ್ಟು […]

KEAಯಿಂದ 4,723 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ ಸೇರಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯ 572, ಸರ್ವೆ ಇಲಾಖೆಯ 750 ಭೂಮಾಪಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಾಲೆಗಳ 1,087 ಶಿಕ್ಷಕರು ಹಾಗೂ 2,314 ಕೆಎಸ್ಆರ್ ಪಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ […]

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜನರಿಗೆ ಅನುಕೂಲವಾಗಲು ಖಾಯಂ ನಿವಾಸ ಪ್ರಮಾಣಪತ್ರ ನೀಡುತ್ತೇವೆ: DCM ಡಾ. ಜಿ. ಪರಮೇಶ್ವರ್

ಬೆಂಗಳೂರು : ಚುನಾವಣಾ ಆಯೋಗದವರು ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 13 ದಾಖಲೆಯನ್ನು ಕೇಳುತ್ತಾರೆ. ಅದರಲ್ಲಿ ʼನೀವು ಸ್ವಂತ ಮನೆಯಲ್ಲಿ ಇದ್ದೀರಾ?ʼ ಎಂಬ ಪ್ರಶ್ನೆಯೂ ಇದೆ. ಹಾಗಾಗಿ ನಾವು ಖಾಯಂ ನಿವಾಸ ಪ್ರಮಾಣಪತ್ರವನ್ನು ನೀಡಲು ಕ್ರಮ ವಹಿಸುವುದಾಗಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಇಂದು ತಮ್ಮ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೆ ಕೇಂದ್ರ ಸರ್ಕಾರ ಯಾವುದೇ ಪ್ರಮಾಣಪತ್ರಗಳನ್ನು ನೀಡಿಲ್ಲ. ಜಾತಿ ಪ್ರಮಾಣಪತ್ರವನ್ನು ಕೂಡ ರಾಜ್ಯ ಸರ್ಕಾರವೇ ನೀಡಿದೆ. ನಾವು ಆಧಾರ್‌ ಕಾರ್ಡ್‌ ಮತ್ತು ಅಗತ್ಯ […]

ವಿಯೆಟ್ನಾಂನಲ್ಲಿ ಭೀಕರ ದುರಂತ: ಪ್ರವಾಸಿಗರ ಬೋಟ್ ಮುಳುಗಿ 15 ಭಾರತೀಯರು ಸಾವು

ಹನೋಯಿ: ದಕ್ಷಿಣ ವಿಯೆಟ್ನಾಂನ ಪ್ರಸಿದ್ಧ ‘ಫೂ ಕ್ವೋಕ್’ (Phu Quoc) ದ್ವೀಪದ ಬಳಿ ಶನಿವಾರ 32 ಭಾರತೀಯ ಪ್ರವಾಸಿಗರು ಹಾಗೂ ನಾಲ್ಕು ಮಂದಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ (ವೇಗದ ದೋಣಿ) ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಕನಿಷ್ಠ 15 ಭಾರತೀಯ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ವಿಯೆಟ್ನಾಂನ ಮಾಧ್ಯಮ ಸಂಸ್ಥೆ ‘ವಿಎನ್‌ಎಕ್ಸ್‌ಪ್ರೆಸ್ ಇಂಟರ್ನ್ಯಾಷನಲ್’ ವರದಿ ಮಾಡಿದೆ. ಪ್ರತಿಕೂಲ ಹವಾಮಾನದ ನಡುವೆಯೂ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಅಪಘಾತಕ್ಕೆ ರಫ್ ಸೀ (ರೌದ್ರಾವತಾರ ತಳೆದ ಸಮುದ್ರ) ಕಾರಣ: ಅಪಘಾತ […]

ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಮುಖ್ಯ ಶಿಕ್ಷಕಿ ಸೇರಿ ನಾಲ್ವರ ವಿರುದ್ಧ FIR ದಾಖಲು

ಬೆಂಗಳೂರು: ಶಾಲಾ ಶಿಕ್ಷಕಿಯರು ನೀಡಿದ ಮಾನಸಿಕ ಕಿರುಕುಳಕ್ಕೆ ಬೇಸತ್ತು ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕಿ ಸೇರಿದಂತೆ ನಾಲ್ವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಮುಖ್ಯಶಿಕ್ಷಕಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು ಜುಲೈ 9 ರಂದು ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ಈ […]