ನೀಟ್ ಪರೀಕ್ಷೆ ಸುತ್ತ ವಿವಾದ – ನೀಟ್ ರದ್ದುಪಡಿಸುವಂತೆ ವಿಜಯ್‌ ಪಕ್ಷ ಆಗ್ರಹ

ಚೆನ್ನೈ: ನೀಟ್ ಪರೀಕ್ಷೆ ಸುತ್ತ ವಿವಾದ ತೀವ್ರವಾಗಿದ್ದು ಈ ವಿಚಾರಕ್ಕೆ ದೆಹಲಿಯಲ್ಲಿ ಯುವಕರು ಧರಣಿ ಮಾಡುತ್ತಿದ್ದಾರೆ. ಇದರ ನಡುವೆ ಪ್ರತಿಭಟನೆಯಲ್ಲಿರುವ ಯುವಕರ ಮೇಲೆ ಪೊಲೀಸ್‌ ಲಾಠಿ ಚಾರ್ಜ್‌ ಮಾಡಿದ್ದಾರೆ .ಇತ್ತ ಕಾಂಗ್ರೇಸ್‌ ಪಕ್ಷ ಯುವಕರಿಗೆ ಬೆಂಬಲ ನೀಡಿದ್ದು, ಇದರ ಮಧ್ಯೆ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ಪರೀಕ್ಷೆ ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿರುವುದು ಬೆಳಕಿಗೆ ಬಂದಿದೆ.

ಮಂಗಳವಾರ ಪ್ರಕಟಿಸಿದ ಹೇಳಿಕೆಯಲ್ಲಿ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಟಿವಿಕೆ ಸಲಹೆ ನೀಡಿದೆ

ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು ಎಂದು ಟಿವಿಕೆ ಆಗ್ರಹಿಸಿದೆ. ಶಿಕ್ಷಣವನ್ನು ಕೇಂದ್ರದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ಪಕ್ಷ ಹೇಳಿದೆ.

ದೆಹಲಿಯಲ್ಲಿ ನೀಟ್ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಕಾಂಗ್ರೆಸ್ ಪಕ್ಷವೂ ಈ ಹೋರಾಟಕ್ಕೆ ಬೆಂಬಲ ನೀಡಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮದ ವಿರುದ್ಧ ಧ್ವನಿ ಎತ್ತಿದ್ದಾರೆ. ಇದೀಗ ತಮಿಳುನಾಡಿನಲ್ಲೂ ನೀಟ್ ವಿಚಾರ ರಾಜಕೀಯವಾಗಿ ಚರ್ಚೆಗೆ ಕಾರಣವಾಗಿದೆ

ಪಕ್ಷವು ಡಿಎಂಕೆ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ನೀಟ್ ರದ್ದು ಮಾಡುತ್ತೇವೆ ಎಂದು ಹೇಳಿ ಜನರ ಮತ ಪಡೆಯುವ ರಾಜಕೀಯವನ್ನು ನಾವು ಮಾಡುವುದಿಲ್ಲ ಎಂದು ಹೇಳಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಟಿವಿಕೆ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಿದೆ. ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿರುವ ಮಾಹಿತಿ ತಿಳಿದು ಬಂದಿದೆ.

Share it :

Leave a Reply

Your email address will not be published. Required fields are marked *