ಬೆಂಗಳೂರು: ಫುಟ್ಪಾತ್ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿಲಾಗುವುದು ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.
ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನಲ್ಲಿ ಸೇಫ್ ಫುಟ್ಪಾತ್ ಅಭಿಯಾನ ಆರಂಭಿಸಿ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಿತ್ತು. ಆದರೆ ಹಲವು ವ್ಯಾಪಾರಿಗಳು ಮತ್ತೆ ಪಾದಚಾರಿ ಮಾರ್ಗಗಗಳನ್ನು ಆಕ್ರಮಿಸಿಕೊಂಡಿದ್ದು, ಇದರಿಂದ ಪಾದಚಾರಿಗಳು ಮತ್ತೆ ರಸ್ತೆಯಲ್ಲೇ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈವರೆಗೆ 964 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿನ ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಬಾಕಿ ಇರುವ ಪಾದಚಾರಿ ಮಾರ್ಗಗಳ ಒತ್ತುವರಿಯನ್ನು ಇದೇ ತಿಂಗಳೊಳಗಾಗಿ ತೆರವುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.
ಇಂದು ಜಿಬಿಎ ವ್ಯಾಪ್ತಿಯಲ್ಲಿ ‘ಪಾದಚಾರಿ ಮಾರ್ಗಗಳ ಒತ್ತುವರಿ ತೆರವು’, ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಹಾಗೂ ‘ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ’ ಕುರಿತು ನಡೆದ ವರ್ಚುವಲ್ ಸಭೆಯನ್ನ ಉದ್ದೇಶಿಸಿ ಮಾತನಾಡಿದ್ದಾರೆ, ನಗರದಲ್ಲಿ ಸುಮಾರು 1,500 ಕಿ.ಮೀ. ಉದ್ದದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಇದುವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಯನ್ನ ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಅಧಿಕಾರಿಗಳು ಹೇಳಿದ್ದಾರೆ.
ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿಯೇ ಬೀದಿ ಬದಿ ವ್ಯಾಪಾರಿಗಳು ಮತ್ತೆ ಬಂದು ವ್ಯಾಪಾರ ಮುಂದುವರಿಸುತ್ತಿರುವುದು ಕಂಡುಬರುತ್ತಿದೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಪುನಃ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುವವರ ಸಾಮಗ್ರಿಗಳನ್ನ ಜಪ್ತಿ ಮಾಡಿ, ಅವರಿಗೆ ದುಪ್ಪಟ್ಟು ದಂಡ ವಿಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಹಲವು ಕಡೆ ಮತ್ತೆ ಫುಟ್ಪಾತ್ ಮೇಲೆ ಅಂಗಡಿಗಳು ಆರಂಭವಾಗಿದ್ದು, ಅಂತವರಿಗೆ ದುಪ್ಪಟ್ಟು ದಂಡ ವಿಧಿಸಿ ಮತ್ತು ಅವರ ಸಾಮಗ್ರಿಗಳನ್ನ ಜಪ್ತಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.





