ನಮಗಿಂತಲೂ ದೊಡ್ಡ ಉದ್ದೇಶಕ್ಕಾಗಿ ಸೇವೆ ಸಲ್ಲಿಸುತ್ತೇವೆ ಇದೇ ನಮ್ಮ ಬದ್ಧತೆ : ಗೌತಮ್‌ ಅದಾನಿ

ನವದೆಹಲಿ: ಗೌತಮ್‌ ಅದಾನಿ ವಿರುದ್ಧದ ಕ್ರಿಮಿನಲ್‌ ಆರೋಪ ಶಾಶ್ವತವಾಗಿ ವಜಾಗೊಳಿಸಿರುವ ಅಮೆರಿಕ ನ್ಯಾಯಾಲಯದ ತೀರ್ಪನ್ನು ಅದಾನಿ ಸಮೂಹದ ಅಧ್ಯಕ್ಷ ಗೌತಮ್‌ ಅದಾನಿ ಅವರು ಸ್ವಾಗತಿಸಿದ್ದಾರೆ, ‘ಸತ್ಯ, ನ್ಯಾಯದ ಮೇಲಿನ ನಂಬಿಕೆ ಅಚಲವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಅಂಚಿಕೊಂಡಿರುವ ಅವರು, ಮುಂದೆಯೂ ಮಹತ್ವದ ಕೆಲಸವನ್ನೇ ಮುಂದುವರಿಸುತ್ತೇವೆ. ನಮ್ಮ ದೇಶಕ್ಕಾಗಿ ನಿರ್ಮಿಸುತ್ತೇವೆ, ಸತ್ಯ, ನ್ಯಾಯಸಮ್ಮತತೆ ಮತ್ತು ಕಾನೂನಿನ ಆಳ್ವಿಕೆಯ ಮೇಲಿನ ತಮ್ಮ ನಂಬಿಕೆ ಸವಾಲಿನ ಅವಧಿಯಲ್ಲೂ ಅಚಲವಾಗಿತ್ತು ಎಂದು ಹೇಳಿದ್ದಾರೆ.

ನಮ್ಮ ನಂತರವೂ ಉಳಿಯುವ ಮೌಲ್ಯವನ್ನು ಸೃಷ್ಟಿಸುತ್ತೇವೆ ಮತ್ತು ನಮಗಿಂತಲೂ ದೊಡ್ಡ ಉದ್ದೇಶಕ್ಕಾಗಿ ಸೇವೆ ಸಲ್ಲಿಸುತ್ತೇವೆ. ಇದೇ ನಮ್ಮ ಬದ್ಧತೆ,” ಎಂದು ಹೇಳಿದ್ದಾರೆ.

2023ರ ಜನವರಿಯಲ್ಲಿ ಪ್ರಸ್ತುತ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಶಾರ್ಟ್‌ ಸೆಲ್ಲರ್‌ ಸಂಸ್ಥೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಅದಾನಿ ಸಮೂಹದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದ ಬಳಿಕ ಅದಾನಿ ಸಮೂಹದ ಮೇಲೆ ತೀವ್ರ ಪರಿಶೀಲನೆ ಆರಂಭವಾಗಿತ್ತು ಎಂದರು.

ನಮ್ಮ ಮೇಲೆ, ವ್ಯವಸ್ಥೆಯ ಮೇಲೆ ಹಾಗೂ ನ್ಯಾಯ ಒದಗಿಸುವ ಭಾರತದ ಸಾಮರ್ಥ್ಯದ ಮೇಲೆ ನಂಬಿಕೆ ಕಳೆದುಕೊಳ್ಳದ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ, ನ್ಯಾಯಾಲಯದ ತೀರ್ಪನ್ನು “ವಿನಮ್ರತೆ ಮತ್ತು ನ್ಯಾಯಾಂಗ ಪ್ರಕ್ರಿಯೆಯ ಬಗ್ಗೆ ಆಳವಾದ ಗೌರವದಿಂದ” ಸ್ವಾಗತಿಸುತ್ತೇನೆ. ಈ ಸವಾಲಿನ ಅವಧಿಯುದ್ದಕ್ಕೂ ಸತ್ಯ, ನ್ಯಾಯಸಮ್ಮತತೆ ಮತ್ತು ಕಾನೂನಿನ ಆಳ್ವಿಕೆಯ ಮೇಲಿನ ನಮ್ಮ ನಂಬಿಕೆ ಅಚಲವಾಗಿತ್ತು ಎಂದು ತಿಳಿಸಿದ್ದಾರೆ.

Share it :

Leave a Reply

Your email address will not be published. Required fields are marked *

Get free tips and resources right in your inbox, along with 10,000+ others